ಬ್ರೇಕಿಂಗ್ ನ್ಯೂಸ್
17-08-23 09:28 pm Mangalore Correspondent ಕರಾವಳಿ
ಉಳ್ಳಾಲ, ಆ.17: ಉಳ್ಳಾಲ ಬೀಚಲ್ಲಿ ರಾಶಿ ಬಿದ್ದಿದ್ದ ತ್ಯಾಜ್ಯದ ಕೊಂಪೆಯನ್ನ ಜನಾಕ್ರೋಶದ ಮೇರೆಗೆ ಉಳ್ಳಾಲ ನಗರಸಭೆ ಆಡಳಿತವು ಕಡೆಗೂ ತರಾತುರಿಯಲ್ಲಿ ತೆರವುಗೊಳಿಸಿತ್ತು. ಇದೀಗ ನಗರಸಭಾ ಕಚೇರಿ ಮುಂದಿನ ಮಹಾತ್ಮ ಗಾಂಧಿ ರಂಗ ಮಂಟಪದಲ್ಲೇ ತ್ಯಾಜ್ಯವನ್ನ ವಿಂಗಡಣೆ ಮಾಡುತ್ತಿದ್ದಾರೆ. ಇದರಿಂದಾಗಿ ಉಳ್ಳಾಲದ ಹೃದಯ ಭಾಗ ಗಬ್ಬೆದ್ದು ನಾರುತ್ತಿದ್ದು ವಾಸನೆ ಗ್ರಹಿಸಲು ನಗರಸಭೆ ಪೌರಾಯುಕ್ತೆ ವಾಣಿ ಆಳ್ವರಿಗೆ ಮೂಗಿಲ್ಲದಾಯ್ತೇ ಎಂಬ ಪ್ರಶ್ನೆ ಮೂಡಿದೆ.
ಉಳ್ಳಾಲ ನಗರದಾದ್ಯಂತ ಸಂಗ್ರಹಿಸಿದ ತ್ಯಾಜ್ಯವನ್ನ ನಗರಸಭೆ ಕಚೇರಿಯ ಮುಂಭಾಗದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಪ್ರತ್ಯೇಕಿಸಿ ಮರು ಲೋಡ್ ಮಾಡಲಾಗುತ್ತಿದೆ. ಈ ಹಿಂದೆ ಅನೇಕ ವರ್ಷಗಳಿಂದ ಉಳ್ಳಾಲ ಬೀಚ್ ರಸ್ತೆ ಬದಿಯಲ್ಲೇ ರಾಶಿಗಟ್ಟಲೆ ತ್ಯಾಜ್ಯವನ್ನ ಸುರಿಯಲಾಗುತ್ತಿತ್ತು. ರೊಚ್ಚಿಗೆದ್ದ ಸ್ಥಳೀಯರು ತ್ಯಾಜ್ಯವನ್ನ ನಗರಸಭೆ ಕಚೇರಿಗೆ ತಂದು ಸುರಿಯಲು ಮುಂದಾದಾಗ ಎಚ್ಚೆತ್ತ ನಗರಸಭೆ ಅಧಿಕಾರಿಗಳು ತರಾತುರಿಯಲ್ಲಿ ತ್ಯಾಜ್ಯವನ್ನು ವಿಲೇವಾರಿಗೊಳಿಸಿ ಪ್ರದೇಶವನ್ನ ಸ್ವಚ್ಛಗೊಳಿಸಿದ್ದರು.



ಈಗ ಬೀಚ್ ರಸ್ತೆ ಬಿಟ್ಟು ತ್ಯಾಜ್ಯ ರಂಗಮಂದಿರಕ್ಕೆ ಶಿಫ್ಟ್ ಆಗಿದೆ. ಇಷ್ಟೊಂದು ವಿಸ್ತೀರ್ಣವುಳ್ಳ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಂಗಡಿಸಲು ಬೇರೆ ಸ್ಥಳವೇ ಸಿಗದಿರೋದು ಹಾಸ್ಯಾಸ್ಪದ ಎಂಬಂತಿದೆ. ಇದಕ್ಕೆ ಅಧಿಕಾರಿ, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣವಾಗಿದೆ.



ಗಬ್ಬೆದ್ದ ರಂಗಮಂದಿರದಲ್ಲಿ ಗಣೇಶೋತ್ಸವ ಸಾಧ್ಯವೇ..?
ಉಳ್ಳಾಲ ವಿದ್ಯಾರಣ್ಯ ಕಲಾವೃಂದದ ವತಿಯಿಂದ ಪ್ರತೀ ವರ್ಷ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಗಣಪತಿಯನ್ನ ಪ್ರತಿಷ್ಟಾಪಿಸಿ ಉತ್ಸವ ನಡೆಸಲಾಗುತ್ತದೆ. ಅದರಂತೆ, ಮುಂದಿನ ತಿಂಗಳಲ್ಲಿ ಇಲ್ಲಿ ಗಣೇಶೋತ್ಸವ ನಡೆಯಬೇಕು. ಆದರೆ, ಈಗಿನ ಸ್ಥಿತಿಯಲ್ಲಿ ಗಣೇಶೋತ್ಸವ ನಡೆಸುವಂತಿಲ್ಲ. ಹೀಗಾಗಿ ಉತ್ಸವ ನಡೆಯಬಾರದೆಂಬ ದೃಷ್ಟಿಯಲ್ಲಿ ಕಾಣದ ಕೈಗಳು ಬೇಕಂತಲೇ ಇಲ್ಲಿ ತ್ಯಾಜ್ಯ ಸುರಿಯುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಆದಷ್ಟು ಬೇಗನೆ ಈ ಪ್ರದೇಶದಲ್ಲಿ ತ್ಯಾಜ್ಯ ವಿಂಗಡನೆ ಕಾರ್ಯ ನಿಲ್ಲಿಸಿ ಗಣೇಶೋತ್ಸವಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದರೆ ನಾವು ನಗರಸಭೆ ವಿರುದ್ಧ ಹೋರಾಟ ನಡೆಸುವುದಾಗಿ ವಿದ್ಯಾರಣ್ಯ ಕಲಾವೃಂದದ ಅಧ್ಯಕ್ಷರಾದ ವಿಜಯ ಕುಮಾರ್ ತಿಳಿಸಿದ್ದಾರೆ.
Mangalore Ullal municipal corporations turns into Garbage dumpyard.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am