ಬ್ರೇಕಿಂಗ್ ನ್ಯೂಸ್
19-08-23 06:24 pm Mangalore Correspondent ಕರಾವಳಿ
ಉಳ್ಳಾಲ, ಆ.19: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.
ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರ ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.
ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು. ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Actor Upendra wife Priyanka visits Koragajja temple at Kuthar in Mangalore as she visits Mangalore for movie shooting.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm