ಬ್ರೇಕಿಂಗ್ ನ್ಯೂಸ್
19-08-23 06:24 pm Mangalore Correspondent ಕರಾವಳಿ
ಉಳ್ಳಾಲ, ಆ.19: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.
ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರ ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.
ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು. ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Actor Upendra wife Priyanka visits Koragajja temple at Kuthar in Mangalore as she visits Mangalore for movie shooting.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm