ಬ್ರೇಕಿಂಗ್ ನ್ಯೂಸ್
19-08-23 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಎಸ್ಡಿಎಂ ವಿದ್ಯಾರ್ಥಿನಿ ಕೊಲೆ ಪ್ರಕರಣ ಮರು ತನಿಖೆಯಾಗಬೇಕು, ನೈಜ ಆರೋಪಿಯನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ಸೌಜನ್ಯಾ ಹೋರಾಟ ಸಮಿತಿಯ ಹೆಸರಲ್ಲಿ ಸಭೆ ಆಯೋಜಿಸಿದ್ದು, ಭಾನುವಾರ ಸಂಜೆ 4 ಗಂಟೆಗೆ ಕದ್ರಿ ಮಂಜುನಾಥ ದೇವಸ್ಥಾನದಿಂದ ಸಾವಿರಾರು ಮಂದಿ ಕದ್ರಿ ಮೈದಾನದ ವರೆಗೆ ಕಾಲ್ನಡಿಗೆಯಲ್ಲಿ ಬಂದು ಸಮಾವೇಶ ನಡೆಸಲಿದ್ದಾರೆ. ಪ್ರತಿಭಟನಾ ಸಭೆಯನ್ನು ಕದ್ರಿ ಜೋಗಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಸೌಜನ್ಯಾ ಪರವಾಗಿ ಗಟ್ಟಿಯಾಗಿ ನಿಂತಿರುವ ಬೆಳ್ತಂಗಡಿಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪ್ರಮುಖ ಭಾಷಣ ಮಾಡಲಿದ್ದಾರೆ.

ಈಗಾಗಲೇ ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಪ್ರತಿಭಟನಾ ಸಭೆ ನಡೆದಿದ್ದು, ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಸೌಜನ್ಯಾ ಹೋರಾಟ ಸಮಿತಿಯ ಸಂಚಾಲಕಿ ಪ್ರಸನ್ನ ರವಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ಪ್ರತಿ ಮನೆಯಿಂದ ಸೌಜನ್ಯಾ ಪರವಾಗಿ ಧ್ವನಿ ಎತ್ತಬೇಕು. ಆಕೆಯನ್ನು ಕ್ರೂರವಾಗಿ ಹಿಂಸಿಸಿ ಕೊಂದು ಹಾಕಿರುವ ದುರುಳರನ್ನು ಜೈಲಿಗೆ ತಳ್ಳುವುದಕ್ಕಾಗಿ ಜನರೇ ಮುಂದೆ ಬರಬೇಕಾಗಿದೆ. ನಿಮ್ಮ ಧ್ವನಿಯೇ ನಮಗೆ ಶ್ರೀರಕ್ಷೆ ಎಂದು ಪ್ರಸನ್ನ ರವಿ ಮನವಿ ಮಾಡಿದ್ದಾರೆ.
ಈಗಾಗಲೇ ಸೌಜನ್ಯಾ ಪರವಾಗಿ ಜಾಲತಾಣದಲ್ಲಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಹೋರಾಟ, ಪ್ರತಿಭಟನೆ ನಡೆಯುತ್ತಿದ್ದು, ಜನರು ಮರು ತನಿಖೆಗಾಗಿ ಆಗ್ರಹ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಭಾರೀ ಸಂಶಯಕ್ಕೆ ಎಡೆ ಮಾಡಿದೆ.
Mangalore Saujanya rape and murder case massive protest to be held at Kadri on August 20th under Mahesh Shetty Thimarodi.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm