ಬ್ರೇಕಿಂಗ್ ನ್ಯೂಸ್
21-08-23 10:05 pm Mangalore Correspondent ಕರಾವಳಿ
ಉಳ್ಳಾಲ, ಆ.21: ಎರಡು ಬೇಕರಿ ಮಾಲೀಕ ಪತ್ನಿ , ಮಗಳು ಇದ್ದ ಸಂದರ್ಭದಲ್ಲೇ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಹಾಸನ ಜಿಲ್ಲೆ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಪುತ್ರಿಯರಾದ 8ನೇ ತರಗತಿಯ ಪೂರ್ವಿಕಾ, 4ನೇ ತರಗತಿಯ ನಿಶ್ಚಿತಾ ಹಾಗೂ ಪತ್ನಿ ಹೇಮಲತಾ ಜೊತೆ ಶಾಂತಿಬಾಗ್ ಬಳಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಹಾಸನ ಜಿಲ್ಲೆಯಿಂದ 12 ವರ್ಷಗಳ ಹಿಂದೆ ವಲಸೆ ಬಂದಿದ್ದ ರುದ್ರೇಶ್ ಅವರು ಕುತ್ತಾರು ಹಾಗೂ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಬಳಿ ಬೆಂಗಳೂರ್ ಅಯ್ಯಂಗಾರ್ ಹೆಸರಿನಲ್ಲಿ ಬೇಕರಿ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಗ್ಗೆ ಬೇಕರಿಯಿಂದ ಮನೆಗೆ ಬಂದವರು ವಾಪಸ್ ಹೋಗಿರಲಿಲ್ಲ. ಮನೆಯ ಕೋಣೆಯೊಂದರಲ್ಲಿ ರುದ್ರೇಶ್ ಉಳಿದಿದ್ದರೆ, ಪತ್ನಿ ಹೇಮಲತಾ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ಹೇಮಲತಾ ಪತಿ ಏಳದೇ ಇರುವುದನ್ನು ಗಮನಿಸಿ ಬಾಗಿಲು ಮುರಿದಾಗ ರುದ್ರೇಶ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ರುದ್ರೇಶ್ ಹೃದಯ ಸಂಬಂಧಿ ಕಾಯಿಲೆಯಲ್ಲಿ ಬಳಲುತ್ತಿದ್ದರಂತೆ. ಪತ್ನಿ ಹೇಮಲತಾ ಕೆಲ ದಿನಗಳ ಹಿಂದೆಯಷ್ಟೇ ಕಿವಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರುದ್ರೇಶ್ ಸಹೋದರಿಯೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಬಂದವರು ಸಹೋದರನ ಮನೆಯಲ್ಲೇ ಪುತ್ರನ ಜತೆಗೆ ಎರಡು ದಿನಗಳಿಂದ ಉಳಿದುಕೊಂಡಿದ್ದರು. ಘಟನೆ ವೇಳೆ ಸಹೋದರಿ ಮತ್ತು ಕಿರಿಯ ಮಗಳು ನಿಶ್ಚಿತಾ ಯೆನೆಪೋಯ ಆಸ್ಪತ್ರೆ ಬಳಿಯ ಬೇಕರಿಯಲ್ಲಿದ್ದರೆ, ಸಹೋದರಿಯ ಪುತ್ರ ಕುತ್ತಾರು ಬೇಕರಿಯಲ್ಲಿ ಇದ್ದರು. ದೊಡ್ಡ ಮಗಳು ಪೂರ್ವಿಕ ಹಾಗೂ ಪತ್ನಿ ಹೇಮಲತಾ ಮನೆಯಲ್ಲೇ ಇದ್ದರು.
ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
Iyengar Bakery owner commits suicide at Kuthar, Ullal in Mangalore. The deceased has been identifed as Rudresh (36) native of Halebidu.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm