ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm