ಬ್ರೇಕಿಂಗ್ ನ್ಯೂಸ್
24-08-23 07:43 pm Mangalore Correspondent ಕರಾವಳಿ
ಉಳ್ಳಾಲ, ಆ.24: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಹಳ್ಳೂರ ಎಂಬಾತ ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ ಉಚಿತ ಪ್ರಯಾಣವಿಲ್ಲವೆಂದು ಹಣ ಕೇಳಿದ್ದು ಹಣ ನೀಡದ್ದಕ್ಕೆ ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸಿ ಅಮಾನವೀಯತೆ ಮರೆದಿದ್ದಾನೆ.


ಕುಂಪಲ ಸರಕಾರಿ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಇಂದು ಶಾಲೆ ಮಗಿಸಿ ಸರಕಾರಿ ಬಸ್ಸು ಹತ್ತಿದ್ದಾರೆ. ಬಸ್ಸಿನ ಎಂದಿನ ನಿರ್ವಾಹಕ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಕೇಳುತ್ತಿರಲಿಲ್ಲವಂತೆ. ಹಾಗಾಗಿ ವಿದ್ಯಾರ್ಥಿನಿಯರು ಆಧಾರ್ ತಂದಿರಲಿಲ್ಲ. ಇಂದು ಖಾಯಂ ನಿರ್ವಾಹಕ ರಜೆ ಮಾಡಿದ್ದು ಹುಸೇನ್ ಸಾಬ್ ಬದಲಿ ಕರ್ತವ್ಯದಲ್ಲಿದ್ದ. ಹುಸೇನ್ ಎಳೆಯ ವಿದ್ಯಾರ್ಥಿಗಳೆಂದು ಕರುಣೆ ತೋರದೆ ಜೇಬಲ್ಲಿ ಹಣ ಇಲ್ಲದೆ ಕುಂಪಲದ ಬಗಂಬಿಲಕ್ಕೆ ತೆರಳಲಿದ್ದ ಐವರು ಮಕ್ಕಳನ್ನ ಮೂರುಕಟ್ಟೆ ಎಂಬಲ್ಲೇ ಕೆಳಗಿಳಿಸಿ ತೆರಳಿದ್ದಾನೆ.
ಈ ವಿದ್ಯಮಾನವನ್ನ ಬಸ್ಸಲ್ಲೇ ಇದ್ದ ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಗುಲಾಬಿ ಅವರು ಗಮನಿಸಿದ್ದಾರೆ.
ಸಂಜೆ ಸ್ಥಳೀಯರು ಕುಂಪಲ ಶಾಲೆಯ ಎದುರೇ ಬಸ್ಸನ್ನ ತಡೆದು ನಿಲ್ಲಿಸಿದ್ದು ನಿರ್ವಾಹಕನನ್ನ ತರಾಟೆಗೆತ್ತಿದ್ದಾರೆ. ಸ್ಥಳೀಯರಾದ ಯಶವಂತ್ ಅವರು ಕೆಎಸ್ ಆರ್ ಟಿಸಿ ಅಧಿಕಾರಿ ರಮ್ಯ ಅವರನ್ನ ಸಂಪರ್ಕಿಸಿ ಎಳೆಯ ಮಕ್ಕಳನ್ನ ಮಾವೀಯತೆ ತೋರಿಸದೆ ಬಸ್ಸಿನಿಂದ ಕೆಳಗಿಳಿಸಿದ ತಪ್ಪಿತಸ್ಥ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No Aaadhar card conductor forces school student to get down from bus at Kumpala in Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm