ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.

ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm