ಬ್ರೇಕಿಂಗ್ ನ್ಯೂಸ್
07-11-20 06:02 pm Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 7: ಭಾರೀ ಕುತೂಹಲ ಮೂಡಿಸಿದ್ದ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿದ ಕಸರತ್ತು ಫಲ ನೀಡಲಿಲ್ಲ. ಕೊನೆಕ್ಷಣದಲ್ಲಿ ಕಾಂಗ್ರೆಸ್, ಎಸ್ ಡಿಪಿಐ ಪಕ್ಷದ ಬೆಂಬಲ ಪಡೆದು ಪುರಸಭೆಯ ಅಧಿಕಾರ ಗಿಟ್ಟಿಸಿಕೊಂಡಿದೆ.
ಕಾಂಗ್ರೆಸ್ ಪಕ್ಷದ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಗೋವಿಂದ ಪ್ರಭು ನಾಮಪತ್ರ ಸಲ್ಲಿಸಿದ್ದರೆ, ಉಪಾಧ್ಯಕ್ಷೆ ಸ್ಥಾನಕ್ಕೆ ಮೀನಾಕ್ಷಿ ಗೌಡ ನಾಮಪತ್ರ ಸಲ್ಲಿಸಿದ್ದರು. ಎಸ್ ಡಿಪಿಐನಿಂದ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮುನೀಶ್ ಅಲಿ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬೇಕಾದ ಅರ್ಹ ಅಭ್ಯರ್ಥಿ ಎಸ್.ಡಿ.ಪಿ.ಐ. ಬಳಿ ಇರಲಿಲ್ಲ. ಕಾಂಗ್ರೆಸ್ 12 ಸ್ಥಾನ, ಬಿಜೆಪಿ 11 ಹಾಗೂ ಎಸ್ ಡಿಪಿಐ 4 ಸ್ಥಾನಗಳನ್ನು ಪಡೆದಿದ್ದವು. ಸ್ಥಳೀಯ ಶಾಸಕ ಮತ್ತು ಸಂಸದರಿಗೆ ಮತ ಚಲಾಯಿಸುವ ಅರ್ಹತೆ ಇದ್ದುದರಿಂದ ಬಿಜೆಪಿ 13 ಸ್ಥಾನಗಳನ್ನು ಪಡೆದು ಅಧಿಕಾರ ಗಳಿಸುವ ವಿಶ್ವಾಸದಲ್ಲಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಎಸ್.ಡಿ.ಪಿ.ಐ. ಅಭ್ಯರ್ಥಿ ಮುನೀಶ್ ಅಲಿ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸಿಗೆ ಬೆಂಬಲ ಘೋಷಿಸಿದರು.





ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಾಗ, ಕಾಂಗ್ರೆಸ್ ಪರವಾಗಿ 12 ಸದಸ್ಯರು ಮತ್ತು ಎಸ್ ಡಿಪಿಐನ 4 ಸದಸ್ಯರು ಒಟ್ಟು 16 ಮತಗಳೊಂದಿಗೆ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿಯ 11 ಸದಸ್ಯರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮತಗಳು ಸೇರಿ ಬಿಜೆಪಿ ಅಭ್ಯರ್ಥಿಗಳಿಗೆ 13 ಮತಗಳು ಚಲಾವಣೆಯಾದವು. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶಿಲ್ದಾರ್ ಎಸ್.ಆರ್.ರಶ್ಮಿ ಕರ್ತವ್ಯ ನಿರ್ವಹಿಸಿದರು.
Congress attains victory in Bantwal Town Municipality Elections that was held here on 7 November, Saturday 2020.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm