ಬ್ರೇಕಿಂಗ್ ನ್ಯೂಸ್
07-11-20 06:02 pm Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 7: ಭಾರೀ ಕುತೂಹಲ ಮೂಡಿಸಿದ್ದ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿದ ಕಸರತ್ತು ಫಲ ನೀಡಲಿಲ್ಲ. ಕೊನೆಕ್ಷಣದಲ್ಲಿ ಕಾಂಗ್ರೆಸ್, ಎಸ್ ಡಿಪಿಐ ಪಕ್ಷದ ಬೆಂಬಲ ಪಡೆದು ಪುರಸಭೆಯ ಅಧಿಕಾರ ಗಿಟ್ಟಿಸಿಕೊಂಡಿದೆ.
ಕಾಂಗ್ರೆಸ್ ಪಕ್ಷದ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಗೋವಿಂದ ಪ್ರಭು ನಾಮಪತ್ರ ಸಲ್ಲಿಸಿದ್ದರೆ, ಉಪಾಧ್ಯಕ್ಷೆ ಸ್ಥಾನಕ್ಕೆ ಮೀನಾಕ್ಷಿ ಗೌಡ ನಾಮಪತ್ರ ಸಲ್ಲಿಸಿದ್ದರು. ಎಸ್ ಡಿಪಿಐನಿಂದ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮುನೀಶ್ ಅಲಿ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬೇಕಾದ ಅರ್ಹ ಅಭ್ಯರ್ಥಿ ಎಸ್.ಡಿ.ಪಿ.ಐ. ಬಳಿ ಇರಲಿಲ್ಲ. ಕಾಂಗ್ರೆಸ್ 12 ಸ್ಥಾನ, ಬಿಜೆಪಿ 11 ಹಾಗೂ ಎಸ್ ಡಿಪಿಐ 4 ಸ್ಥಾನಗಳನ್ನು ಪಡೆದಿದ್ದವು. ಸ್ಥಳೀಯ ಶಾಸಕ ಮತ್ತು ಸಂಸದರಿಗೆ ಮತ ಚಲಾಯಿಸುವ ಅರ್ಹತೆ ಇದ್ದುದರಿಂದ ಬಿಜೆಪಿ 13 ಸ್ಥಾನಗಳನ್ನು ಪಡೆದು ಅಧಿಕಾರ ಗಳಿಸುವ ವಿಶ್ವಾಸದಲ್ಲಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಎಸ್.ಡಿ.ಪಿ.ಐ. ಅಭ್ಯರ್ಥಿ ಮುನೀಶ್ ಅಲಿ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸಿಗೆ ಬೆಂಬಲ ಘೋಷಿಸಿದರು.





ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಾಗ, ಕಾಂಗ್ರೆಸ್ ಪರವಾಗಿ 12 ಸದಸ್ಯರು ಮತ್ತು ಎಸ್ ಡಿಪಿಐನ 4 ಸದಸ್ಯರು ಒಟ್ಟು 16 ಮತಗಳೊಂದಿಗೆ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿಯ 11 ಸದಸ್ಯರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮತಗಳು ಸೇರಿ ಬಿಜೆಪಿ ಅಭ್ಯರ್ಥಿಗಳಿಗೆ 13 ಮತಗಳು ಚಲಾವಣೆಯಾದವು. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶಿಲ್ದಾರ್ ಎಸ್.ಆರ್.ರಶ್ಮಿ ಕರ್ತವ್ಯ ನಿರ್ವಹಿಸಿದರು.
Congress attains victory in Bantwal Town Municipality Elections that was held here on 7 November, Saturday 2020.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm