ಬ್ರೇಕಿಂಗ್ ನ್ಯೂಸ್
07-11-20 06:02 pm Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 7: ಭಾರೀ ಕುತೂಹಲ ಮೂಡಿಸಿದ್ದ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿದ ಕಸರತ್ತು ಫಲ ನೀಡಲಿಲ್ಲ. ಕೊನೆಕ್ಷಣದಲ್ಲಿ ಕಾಂಗ್ರೆಸ್, ಎಸ್ ಡಿಪಿಐ ಪಕ್ಷದ ಬೆಂಬಲ ಪಡೆದು ಪುರಸಭೆಯ ಅಧಿಕಾರ ಗಿಟ್ಟಿಸಿಕೊಂಡಿದೆ.
ಕಾಂಗ್ರೆಸ್ ಪಕ್ಷದ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಗೋವಿಂದ ಪ್ರಭು ನಾಮಪತ್ರ ಸಲ್ಲಿಸಿದ್ದರೆ, ಉಪಾಧ್ಯಕ್ಷೆ ಸ್ಥಾನಕ್ಕೆ ಮೀನಾಕ್ಷಿ ಗೌಡ ನಾಮಪತ್ರ ಸಲ್ಲಿಸಿದ್ದರು. ಎಸ್ ಡಿಪಿಐನಿಂದ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮುನೀಶ್ ಅಲಿ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬೇಕಾದ ಅರ್ಹ ಅಭ್ಯರ್ಥಿ ಎಸ್.ಡಿ.ಪಿ.ಐ. ಬಳಿ ಇರಲಿಲ್ಲ. ಕಾಂಗ್ರೆಸ್ 12 ಸ್ಥಾನ, ಬಿಜೆಪಿ 11 ಹಾಗೂ ಎಸ್ ಡಿಪಿಐ 4 ಸ್ಥಾನಗಳನ್ನು ಪಡೆದಿದ್ದವು. ಸ್ಥಳೀಯ ಶಾಸಕ ಮತ್ತು ಸಂಸದರಿಗೆ ಮತ ಚಲಾಯಿಸುವ ಅರ್ಹತೆ ಇದ್ದುದರಿಂದ ಬಿಜೆಪಿ 13 ಸ್ಥಾನಗಳನ್ನು ಪಡೆದು ಅಧಿಕಾರ ಗಳಿಸುವ ವಿಶ್ವಾಸದಲ್ಲಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಎಸ್.ಡಿ.ಪಿ.ಐ. ಅಭ್ಯರ್ಥಿ ಮುನೀಶ್ ಅಲಿ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸಿಗೆ ಬೆಂಬಲ ಘೋಷಿಸಿದರು.





ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಾಗ, ಕಾಂಗ್ರೆಸ್ ಪರವಾಗಿ 12 ಸದಸ್ಯರು ಮತ್ತು ಎಸ್ ಡಿಪಿಐನ 4 ಸದಸ್ಯರು ಒಟ್ಟು 16 ಮತಗಳೊಂದಿಗೆ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿಯ 11 ಸದಸ್ಯರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮತಗಳು ಸೇರಿ ಬಿಜೆಪಿ ಅಭ್ಯರ್ಥಿಗಳಿಗೆ 13 ಮತಗಳು ಚಲಾವಣೆಯಾದವು. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶಿಲ್ದಾರ್ ಎಸ್.ಆರ್.ರಶ್ಮಿ ಕರ್ತವ್ಯ ನಿರ್ವಹಿಸಿದರು.
Congress attains victory in Bantwal Town Municipality Elections that was held here on 7 November, Saturday 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am