ಬ್ರೇಕಿಂಗ್ ನ್ಯೂಸ್
28-08-23 06:43 pm Mangalore Correspondent ಕರಾವಳಿ
ಉಳ್ಳಾಲ, ಆ.28: ಬಾರ್ ಎಂಡ್ ರೆಸ್ಟೋರೆಂಟ್ ಗೆ ಬಂದಿದ್ದ ವ್ಯಕ್ತಿಯೋರ್ವ ಸಮೀಪದ ಖಾಸಗಿ ಲೇ ಔಟ್ ಒಂದರ ಕೊಳದಲ್ಲಿ ಶಂಕಾಸ್ಪದವಾಗಿ ಮುಳುಗಿ ಸಾವನ್ನಪ್ಪಿದ ಘಟನೆ ತಲಪಾಡಿ ಗಡಿಯಲ್ಲಿ ನಡೆದಿದ್ದು, ಆತನ ಜೊತೆ ಕೊಳದಲ್ಲಿ ಈಜಾಡಿದ್ದೇವೆ ಎಂದ ನಾಲ್ವರ ವಿರುದ್ಧ ಶಂಕೆ ಮೂಡಿದೆ.
ಕಾಸರಗೋಡು ಜಿಲ್ಲೆಯ ಹೊಸಂಗಡಿ, ದುರ್ಗಿಪಳ್ಳ ನಿವಾಸಿ ಚಡ್ಡಿ ಹರೀಶ ಯಾನೆ ಹರಿಪ್ರಸಾದ್ ಆಚಾರ್ಯ (36) ಮೃತ ವ್ಯಕ್ತಿ. ಹರಿಪ್ರಸಾದ್ ಅವಿವಾಹಿತರಾಗಿದ್ದು ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದರು. ಕುಡಿತದ ಚಟಕ್ಕೆ ದಾಸರಾಗಿದ್ದ ಅವರು ಕಳೆದ ನಾಲ್ಕು ದಿವಸಗಳಿಂದ ಮನೆಗೆ ಹೋಗಿರಲಿಲ್ಲ. ಈ ನಡುವೆ, ನಿನ್ನೆ ರಾತ್ರಿ ಮನೆಗೆ ತೆರಳಿ ಇಂದು ಬೆಳಗ್ಗೆ ಮತ್ತೆ ಮನೆ ಬಿಟ್ಟಿದ್ದರು ಎನ್ನಲಾಗಿದ್ದು ಮಧ್ಯಾಹ್ನ ಸುಮಾರಿಗೆ ತಲಪಾಡಿಯ ಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.


ತಲಪಾಡಿಯ ನಿಸರ್ಗ ಬಾರ್ ನಲ್ಲಿ ಬೆಳಗ್ಗೆ ಮದ್ಯ ಸೇವಿಸಿದ್ದ ಹರಿಪ್ರಸಾದ್ ಗೆಳೆಯರಾದ ಯುವರಾಜ್ ಯಾನೆ ಮುನ್ನ, ಲೋಹಿತ್, ನವೀನ್ ದೇವಾಡಿಗ, ನಿತೇಶ್ ಉಚ್ಚಿಲ್ ಅವರೊಂದಿಗೆ ಸಮೀಪದ ಖಾಸಗಿ ಲೇ ಔಟಿನ ಕೊಳವೊಂದರಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ, ಈಜು ತಿಳಿಯದ ಹರಿಪ್ರಸಾದ್ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.


ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಜೊತೆಯಲ್ಲಿದ್ದ ನಾಲ್ವರು ತಾವು ಈಜಾಡಿ ವಾಪಾಸು ಹೋಗುತ್ತಿದ್ದಾಗ ಹರಿಪ್ರಸಾದ್ ಶರ್ಟ್, ಪ್ಯಾಂಟ್ ತೆಗೆದು ನೀರಿಗೆ ಧುಮುಕಿದ್ದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಆದರೆ ಜೊತೆಯಲ್ಲಿದ್ದವರ ಹೇಳಿಕೆ ಬಗ್ಗೆ ಸ್ಥಳೀಯರಲ್ಲಿ ಅನುಮಾನಗಳಿವೆ.
ಘಟನಾ ಸ್ಥಳಕ್ಕೆ ಮೃತರ ತಮ್ಮ ಅರುಣ್ ಕುಮಾರ್ ಬಂದಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore 36 year old man dies after drowning in Lake at Talapady, alcohol consumption suspected. The deceased has been identifed as Hariprasad Acharya. Ullal police have regsitered the case.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am