ಬ್ರೇಕಿಂಗ್ ನ್ಯೂಸ್
29-08-23 10:50 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸೆ.11ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ನೈಜ ಆರೋಪಿ ಸಿಕ್ಕಿಲ್ಲವೆಂದು ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಜನರ ಹಕ್ಕೊತ್ತಾಯ ಪರಿಗಣಿಸಿ ರಾಜ್ಯ ಸರಕಾರವೇ ಸ್ವತಃ ಮುತುವರ್ಜಿ ವಹಿಸಿ ಪ್ರಕರಣವನ್ನು ತನಿಖೆಗೆ ಆದೇಶ ಮಾಡಬೇಕು. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಸರಕಾರದ ಗಮನ ಸೆಳೆಯುತ್ತೇವೆ. ಆಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸುತ್ತೇವೆ ಎಂದು ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಸೆ.11ರಂದು ಬೆಳ್ತಂಗಡಿ ಮತ್ತು ಮಂಗಳೂರು ತಾಲೂಕಿನವರು ಪಾಲ್ಗೊಳ್ಳಲಿದ್ದಾರೆ. 12ರಂದು ವಿಟ್ಲ ಮತ್ತು ಪುತ್ತೂರು ತಾಲೂಕಿನವರು ಹಾಗೂ 13ರಂದು ಸುಳ್ಯ ಮತ್ತು ಕಡಬ ತಾಲೂಕಿನ ಒಕ್ಕಲಿಗ ಸಂಘದ ಪ್ರತಿನಿಧಿಗಳು, ಇತರೇ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ನೀವು ಕಾನೂನು ಹೋರಾಟ ಮಾಡುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದೇವೆ. ಸೌಜನ್ಯಾ ಪರವಾಗಿ ಹೋರಾಟ ನಡೆಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ವಕೀಲರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಇದರ ಜೊತೆಗೆ ಒಕ್ಕಲಿಗರ ಸಮುದಾಯದಿಂದ ಧ್ವನಿಯೆತ್ತಲು ಬಾಲಗಂಗಾಧರ ನಾಥ ಸ್ವಾಮೀಜಿ ಅವರನ್ನು ಭೇಟಿ ಆಗಲಿದ್ದೇವೆ ಎಂದು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಒಕ್ಕಲಿಗರ ಸಂಘದ ತಾಲೂಕು ಘಟಕದ ಪ್ರಮುಖರಾದ ಚಂದ್ರ ಕೋಲ್ಚಾರ್, ಗುರುದೇವ್ ಯು.ಬಿ, ಸುರೇಶ್ ಬೈಲು, ವಿಶ್ವನಾಥ್, ಕುಶಾಲಪ್ಪ ಗೌಡ, ಮೋನಪ್ಪ ಗೌಡ, ರಕ್ಷಿತ್ ಸುತ್ತಿಲ, ಕಿರಣ್ ಬುಡ್ಲೆಗುತ್ತು ಮತ್ತಿತರರಿದ್ದರು.
Sowjnaya rape case, September 11 to 13 protest by Vokkaligas near DC office in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm