ಬ್ರೇಕಿಂಗ್ ನ್ಯೂಸ್
29-08-23 11:04 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 29: ಪುತ್ತೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಡವರು ಮನೆ, ಅನ್ನ, ಬಟ್ಟೆ, ಬೆಳಕು ಇಲ್ಲದೆ ಕೊರಗಬಾರದು. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನಿಂದ ಈಗಾಗಲೇ ನೋಂದಣಿ ಮಾಡಿಸಿರುವ 600 ಮಂದಿ ಬಡವರಿಗೆ ನಿವೇಶನ ನೀಡಲಾಗುವುದು. ಇದಕ್ಕಾಗಿ ವಿಟ್ಲ ಭಾಗದಲ್ಲಿ 5 ಎಕರೆ ಭೂಮಿ ಖರೀದಿ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರು ನಗರಸಭೆಯ ಹಳೆಯ ಕಚೇರಿ ಕಟ್ಟಡದಲ್ಲಿ ಶಾಸಕರ ಕಚೇರಿ ಉದ್ಘಾಟಿಸಿದ ಬಳಿಕ ಅವರು ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು. ಪ್ರತಿ ಕುಟುಂಬಕ್ಕೆ 3 ಸೆಂಟ್ಸ್ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಜತೆಗೆ, ಗ್ರಾಮೀಣ ಭಾಗದಲ್ಲಿ 1 ಸಾವಿರ ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ನಿವೇಶನ ಕಾದಿರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದವರು ತಿಳಿಸಿದರು.
ಕಚೇರಿ ಸಹಾಯಕರಿಗೆ ₹2.25 ಲಕ್ಷ ಸಂಬಳ
ವಿವಿಧ ಕೆಲಸಗಳಿಗಾಗಿ ಶಾಸಕರ ಕಚೇರಿಗೆ ಬರುವ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಆಪ್ತ ಸಹಾಯಕರು ಮಾತ್ರವಲ್ಲದೆ ಇತರ 7 ಮಂದಿ ಸಹಾಯಕರನ್ನು ಕಚೇರಿಯಲ್ಲಿ ನಿಯೋಜಿಸಲಾಗಿದೆ. ವೈದ್ಯಕೀಯ, ಕಂದಾಯ, ನಗರ ಸಮಸ್ಯೆ ಸೇರಿ ಪ್ರತಿ ಇಲಾಖೆಗೆ ಸಂಬಂಧಿಸಿ ಜನರ ಕೆಲಸಗಳನ್ನು ಇವರು ಮಾಡಲಿದ್ದಾರೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ಗೆ ಸಂಬಂಧಿಸಿ ಇಬ್ಬರು ಸಹಾಯಕರಿದ್ದಾರೆ. ತಮ್ಮ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗುವವರಿಗೆ ಅನುಕೂಲವಾಗುವಂತೆ ಅಲ್ಲಿಯೂ ಇಬ್ಬರು ಸಹಾಯಕರನ್ನು ನಿಯೋಜಿಸಲಾಗಿದೆ. ಪ್ರತಿ ತಿಂಗಳು ಸಹಾಯಕರಿಗೆ ಒಟ್ಟು ₹2.25 ಲಕ್ಷವನ್ನು ವೈಯಕ್ತಿಕವಾಗಿ ನೀಡುತ್ತಿದ್ದೇನೆ ಎಂದು ಅಶೋಕ್ ರೈ ಹೇಳಿದ್ದಾರೆ.
The poor in Puttur assembly constituency should not suffer without houses, food, clothes and light. In this regard, 600 poor people who have already registered with Rai Estate Educational and Charitable Trust will be given plots. Mla Ashok Kumar Rai said that five acres of land has been purchased in Vitla area for this purpose.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm