ಬ್ರೇಕಿಂಗ್ ನ್ಯೂಸ್
01-09-23 12:44 pm Mangalore Correspondent ಕರಾವಳಿ
ಮಂಗಳೂರು, ಸೆ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ಸ್ವರಾಜ್(24) ನಿನ್ನೆ ಬೆಳಗ್ಗೆ ತನ್ನ ಮನೆಯ ಬಳಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಲೋನ್ ಆ್ಯಪ್ ನಿಂದ 'Baby for sale' ಅಂತ ಕಿರುಕುಳ ನೀಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ವಾಟ್ಸಾಪ್ ನಲ್ಲಿ ಅಕ್ಕನ ಮಗುವಿನ ಫೋಟೊ ಹಾಕಿದ್ದ ಸ್ವರಾಜ್ ಗೆ ಅದೇ ಫೋಟೊ ಮುಂದಿಟ್ಟು ಕಿರುಕುಳ ನೀಡಲಾಗಿದೆ. ಮಗುವಿನ ಫೋಟೋವನ್ನು 'Baby for sale' ಅಂತ ಎಡಿಟ್ ಮಾಡಿ ಆತನ ಸ್ನೇಹಿತರು ಮತ್ತು ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿದ್ದವರಿಗೆಲ್ಲ ಫಾರ್ವರ್ಡ್ ಮಾಡಲಾಗಿತ್ತು.

ಸ್ವರಾಜ್ ಮೊಬೈಲ್ ಕಾಂಟ್ಯಾಕ್ಟ್ ಲಿಸ್ಟನ್ನು ನಕಲು ಮಾಡಿದ್ದ ಲೋನ್ ಆ್ಯಪ್ ನವರು ಮಗುವಿನ ಫೋಟೋವನ್ನೇ ನಕಲಿಸಿ ಮಗು ಮಾರಾಟಕ್ಕಿದೆ ಎಂದು ಹೇಳಿ ಫಾರ್ವರ್ಡ್ ಮಾಡಿದ್ದರು. ಇದರಿಂದ ತೀವ್ರ ನೊಂದಿದ್ದ ಸ್ವರಾಜ್ ಬ್ಲಾಕ್ ಮೇಲ್ ಒಳಗಾಗಿದ್ದರು. ಒತ್ತಡ ತಡೆಯಲಾಗದೇ ಆ.30 ರಂದು ಸ್ವರಾಜ್ 30 ಸಾವಿರ ರೂ. ಹಣವನ್ನು ಕಟ್ಟಿದ್ದರು ಎನ್ನಲಾಗಿದೆ. ಆ.31 ರಂದು ಮಧ್ಯಾಹ್ನ 2 ಗಂಟೆ ಒಳಗೆ ಉಳಿದ ಹಣ ಬಡ್ಡಿ ಸಹಿತ ನೀಡುವಂತೆ ಡೆಡ್ ಲೈನ್ ನೀಡಿದ್ದರು. ಇದರ ನಡುವಲ್ಲೇ ಹಿಂಸೆ ತಾಳಲಾರದೆ ಸ್ವರಾಜ್ ನಿನ್ನೆ ಬೆಳಗ್ಗೆ ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯದ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು ಲೋನ್ ಆ್ಯಪ್ ಕಿರುಕುಳದಿಂದಲೇ ಯುವಕ ಸಾವಿಗೆ ಶರಣಾದ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ.
In a major twist to the suicide case of Dakshina Kannada district-level youth kabaddi player Swaraj, it is suspected that she committed suicide after being harassed by the loan app. Swaraj (24), a resident of Puduvettu village in Belthangady taluk, committed suicide by hanging herself near her house yesterday morning. During the investigation, it came to light that he was harassed by the loan app as 'Baby for sale'.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm