ಬ್ರೇಕಿಂಗ್ ನ್ಯೂಸ್
08-11-20 07:27 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದ ಹಂಪನಕಟ್ಟೆ ರಸ್ತೆ ಕಾಂಕ್ರೀಟಿಕರಣ ಮತ್ತು ಒಳಚರಂಡಿ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಹಂಪನಕಟ್ಟೆ ಸುತ್ತಮುತ್ತ ನ.8ರಿಂದ 2021ರ ಜನವರಿ 6ರ ವರೆಗೆ ವಾಹನ ಸಂಚಾರ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹಂಪನಕಟ್ಟೆ ಕಡೆಯಿಂದ ನವಭಾರತ ವೃತ್ತದ ಕಡೆಗೆ ಏಕಮುಖ ವಾಹನ ಸಂಚಾರ ಇರಲಿದೆ. ನವಭಾರತ್ ಸರ್ಕಲ್ ಕಡೆಯಿಂದ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಹಂಪನಕಟ್ಟೆ ಕಡೆಯಿಂದ ಬಾವುಟಗುಡ್ಡೆ, ಫಳ್ನೀರ್ ಕಡೆಗೆ ಸಂಚರಿಸುವ ಎಲ್ಲ ವಾಹನಗಳು ಕೆ.ಎಸ್. ರಾವ್ ರಸ್ತೆಯ ಮೂಲಕ ಪಿವಿಎಸ್ ಕಡೆಗೆ ಹಾಗೂ ಅಂಬೇಡ್ಕರ್ ವೃತ್ತ ಮೂಲಕ ಮುಂದುವರೆಯಬೇಕು.
ಅಂಬೇಡ್ಕರ್ ವೃತ್ತದ ಕಡೆಯಿಂದ ಹಂಪನಕಟ್ಟೆ ಕಡೆಗೆ ಬರುವ ಎಲ್ಲ ವಾಹನಗಳು ಬಲ್ಮಠ ರಸ್ತೆಯಲ್ಲಿರುವ ಅರವಿಂದ ಮೋಟಾರ್ಸ್ ಶೋರೂಂ ಎದುರಿನ ಮಿಲಾಗ್ರಿಸ್ ಕ್ರಾಸ್ ರಸ್ತೆ ಮೂಲಕ ಫಳ್ನೀರು ರಸ್ತೆ ಪ್ರವೇಶಿಸಿ ವೆನ್ಲಾಕ್ ಆಸ್ಪತ್ರೆಯ ಅಂಡರ್ಪಾಸ್ ರಸ್ತೆಯ ಮೂಲಕ ರೈಲ್ವೆ ಸ್ಟೇಶನ್ ರಸ್ತೆ ಮೂಲಕ ತಾಲೂಕು ಪಂಚಾಯತ್ ಕಚೇರಿ ಪಕ್ಕದ ಯು.ಪಿ. ಮಲ್ಯ ರಸ್ತೆಯ ಮೂಲಕ ಎ.ಬಿ. ಶೆಟ್ಟಿ ಸರ್ಕಲ್ ಕಡೆಗೆ ತೆರಳಬೇಕು.
ಮಿಲಾಗ್ರಿಸ್ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ರೈಲ್ವೆ ಸ್ಟೇಷನ್ನಿಂದ ವೆನ್ಲಾಕ್ ಆಸ್ಪತ್ರೆಯ ಅಂಡರ್ ಪಾಸ್ ರಸ್ತೆ ಮೂಲಕ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ವೃತ್ತದ ಕಡೆಯಿಂದ ಬಾವುಟಗುಡ್ಡೆ ಕಡೆಗೆ ವಾಹನಗಳ ದ್ವಿಮುಖ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಈ ನಿರ್ಬಂಧ ಪೊಲೀಸ್ ವಾಹನ ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಇಡೀ ಹಂಪನಕಟ್ಟೆ ಪ್ರದೇಶದಲ್ಲಿ ದಿಢೀರ್ ವಾಹನ ಸಂಚಾರ ಸ್ಥಗಿತಗೊಳಿಸಿ ಆದೇಶ ಮಾಡಿರುವುದು ಅಲ್ಲಿನ ಪ್ರದೇಶದ ನಿವಾಸಿಗಳಿಗೆ ಕಷ್ಟವಾಗಿದೆ. ರಸ್ತೆ ಬಂದ್ ಮಾಡಿರುವ ವಿಚಾರ ತಿಳಿಯದೆ ಬಾವುಟಗುಡ್ಡೆಯ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ.
In an order issued by city police commissioner Vikash Kumar on Saturday, November 7, vehicular traffic will be prohibited in areas around Hampankatta from November 8 to January 6, 2021, due to road concreting and underground drainage work.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm