ಬ್ರೇಕಿಂಗ್ ನ್ಯೂಸ್
08-11-20 07:27 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದ ಹಂಪನಕಟ್ಟೆ ರಸ್ತೆ ಕಾಂಕ್ರೀಟಿಕರಣ ಮತ್ತು ಒಳಚರಂಡಿ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಹಂಪನಕಟ್ಟೆ ಸುತ್ತಮುತ್ತ ನ.8ರಿಂದ 2021ರ ಜನವರಿ 6ರ ವರೆಗೆ ವಾಹನ ಸಂಚಾರ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹಂಪನಕಟ್ಟೆ ಕಡೆಯಿಂದ ನವಭಾರತ ವೃತ್ತದ ಕಡೆಗೆ ಏಕಮುಖ ವಾಹನ ಸಂಚಾರ ಇರಲಿದೆ. ನವಭಾರತ್ ಸರ್ಕಲ್ ಕಡೆಯಿಂದ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಹಂಪನಕಟ್ಟೆ ಕಡೆಯಿಂದ ಬಾವುಟಗುಡ್ಡೆ, ಫಳ್ನೀರ್ ಕಡೆಗೆ ಸಂಚರಿಸುವ ಎಲ್ಲ ವಾಹನಗಳು ಕೆ.ಎಸ್. ರಾವ್ ರಸ್ತೆಯ ಮೂಲಕ ಪಿವಿಎಸ್ ಕಡೆಗೆ ಹಾಗೂ ಅಂಬೇಡ್ಕರ್ ವೃತ್ತ ಮೂಲಕ ಮುಂದುವರೆಯಬೇಕು.
ಅಂಬೇಡ್ಕರ್ ವೃತ್ತದ ಕಡೆಯಿಂದ ಹಂಪನಕಟ್ಟೆ ಕಡೆಗೆ ಬರುವ ಎಲ್ಲ ವಾಹನಗಳು ಬಲ್ಮಠ ರಸ್ತೆಯಲ್ಲಿರುವ ಅರವಿಂದ ಮೋಟಾರ್ಸ್ ಶೋರೂಂ ಎದುರಿನ ಮಿಲಾಗ್ರಿಸ್ ಕ್ರಾಸ್ ರಸ್ತೆ ಮೂಲಕ ಫಳ್ನೀರು ರಸ್ತೆ ಪ್ರವೇಶಿಸಿ ವೆನ್ಲಾಕ್ ಆಸ್ಪತ್ರೆಯ ಅಂಡರ್ಪಾಸ್ ರಸ್ತೆಯ ಮೂಲಕ ರೈಲ್ವೆ ಸ್ಟೇಶನ್ ರಸ್ತೆ ಮೂಲಕ ತಾಲೂಕು ಪಂಚಾಯತ್ ಕಚೇರಿ ಪಕ್ಕದ ಯು.ಪಿ. ಮಲ್ಯ ರಸ್ತೆಯ ಮೂಲಕ ಎ.ಬಿ. ಶೆಟ್ಟಿ ಸರ್ಕಲ್ ಕಡೆಗೆ ತೆರಳಬೇಕು.
ಮಿಲಾಗ್ರಿಸ್ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ರೈಲ್ವೆ ಸ್ಟೇಷನ್ನಿಂದ ವೆನ್ಲಾಕ್ ಆಸ್ಪತ್ರೆಯ ಅಂಡರ್ ಪಾಸ್ ರಸ್ತೆ ಮೂಲಕ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ವೃತ್ತದ ಕಡೆಯಿಂದ ಬಾವುಟಗುಡ್ಡೆ ಕಡೆಗೆ ವಾಹನಗಳ ದ್ವಿಮುಖ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಈ ನಿರ್ಬಂಧ ಪೊಲೀಸ್ ವಾಹನ ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಇಡೀ ಹಂಪನಕಟ್ಟೆ ಪ್ರದೇಶದಲ್ಲಿ ದಿಢೀರ್ ವಾಹನ ಸಂಚಾರ ಸ್ಥಗಿತಗೊಳಿಸಿ ಆದೇಶ ಮಾಡಿರುವುದು ಅಲ್ಲಿನ ಪ್ರದೇಶದ ನಿವಾಸಿಗಳಿಗೆ ಕಷ್ಟವಾಗಿದೆ. ರಸ್ತೆ ಬಂದ್ ಮಾಡಿರುವ ವಿಚಾರ ತಿಳಿಯದೆ ಬಾವುಟಗುಡ್ಡೆಯ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ.
In an order issued by city police commissioner Vikash Kumar on Saturday, November 7, vehicular traffic will be prohibited in areas around Hampankatta from November 8 to January 6, 2021, due to road concreting and underground drainage work.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 11:02 pm
Mangalore Correspondent
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm