ಬ್ರೇಕಿಂಗ್ ನ್ಯೂಸ್
06-09-23 07:19 pm Mangalore Correspondent ಕರಾವಳಿ
ಮಂಗಳೂರು, ಸೆ.6: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆ, ಮೆರವಣಿಗೆ ಇನ್ನಿತರ ಉತ್ಸವಗಳಲ್ಲಿ ಸಾವಿರಾರು ಜನರು ಸೇರುವುದರಿಂದ ಆಯಾ ಭಾಗದಲ್ಲಿ ಆಸುಪಾಸಿನ ಮದ್ಯದಂಗಡಿಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ವ್ಯಾಪ್ತಿಗಳಲ್ಲಿ ಆಯಾ ಭಾಗದ ಪೊಲೀಸ್ ವರಿಷ್ಠರ ಕೋರಿಕೆಯಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಸೆ.6ರಂದು ಕಂಕನಾಡಿ ವೆಲೆನ್ಸಿಯಾ ಜಂಕ್ಷನ್, ಬಂಟ್ಸ್ ಹಾಸ್ಟೆಲ್ ಆಸುಪಾಸಿನಲ್ಲಿ, ಉಳ್ಳಾಲ ಠಾಣೆ ವ್ಯಾಪ್ತಿಯ ಕುಂಪಲ, ತಲಪಾಡಿ ಆಸುಪಾಸಿನಲ್ಲಿ ಮದ್ಯದಂಗಡಿ ನಿಷೇಧ ಇರುತ್ತದೆ.
ಸೆ.7ರಂದು ಅತ್ತಾವರ ಕಟ್ಟೆ ಆಸುಪಾಸಿನಲ್ಲಿ, ಉರ್ವಾ ಸ್ಟೋರ್ ಜಂಕ್ಷನ್, ಅಶೋಕನಗರ ಜಂಕ್ಷನ್, ಉರ್ವಾ ಮೈದಾನ, ಬೊಕ್ಕಪಟ್ನ ಜಂಕ್ಷನ್, ಕದ್ರಿ ಕಂಬ್ಲ ಆಸುಪಾಸಿನ ಮಲ್ಲಿಕಟ್ಟೆಯ ಮದ್ಯದಂಗಡಿಗಳು, ವಾಮಂಜೂರು, ತಿರುವೈಲ್ ನಲ್ಲಿ ಮದ್ಯ ನಿಷೇಧ ಇರುತ್ತದೆ. ಅಲ್ಲದೆ, ಮರೋಳಿ, ಕುಲಶೇಖರ ಚೌಕಿ, ಸುದರ್ಶನ್ ನಗರ ಪಜೀರು, ಅಸೈಗೋಳಿ, ನೆತ್ತಿಲಪದವು, ತೊಕ್ಕೊಟ್ಟು, ಕೆಳಗಿನ ತಲಪಾಡಿ, ಪಂಜಿಮೊಗರು ಜಂಕ್ಷನ್, ಕಾವೂರು, ಮೂಡುಶೆಡ್ಡೆ ಜಂಕ್ಷನ್, ಕುಂಜತ್ತ್ ಬೈಲು, ಕುಳೂರು, ಪಕ್ಷಿಕೆರೆ- ಅತ್ತೂರು, ಮೂಡುಬಿದ್ರೆ ಪೇಟೆಯಲ್ಲಿರುವ ಮದ್ಯದಂಗಡಿಗಳು ಬಂದ್ ಆಗಲಿವೆ. ಸುರತ್ಕಲ್ ಇಡ್ಯಾ, ಕುಳಾಯಿ, ಜೋಕಟ್ಟೆ, ಕಳವಾರು, ಕೃಷ್ಣಾಪುರ- ಕಾಟಿಪಳ್ಳ, ಚಿತ್ರಾಪುರ, ಮುಕ್ಕ ವಠಾರದಲ್ಲಿ ಮದ್ಯ ನಿಷೇಧ ಇರಲಿದೆ.
ಇದೇ ರೀತಿ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುತ್ತೂರು ನಗರ ಠಾಣೆ, ಪುತ್ತೂರು ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಸುಳ್ಯ ಠಾಣೆ, ಬೆಳ್ಳಾರೆ ಠಾಣೆ ವ್ಯಾಪ್ತಿಯಲ್ಲಿ ಸೆ.7ರಿಂದ 9ರ ವರೆಗೆ ವಿವಿಧ ಕಡೆಗಳಲ್ಲಿ ನಡೆಯುವ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವದ ನಿಮಿತ್ತ ಆಯಾ ಭಾಗದಲ್ಲಿ ಮದ್ಯದಂಗಡಿ ನಿಷೇಧ ಇರಲಿದೆ.
Closure of all liquor shops to be closed in Dakshina Kannada and Mangalore over Mosaru Kudike.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am