ಬ್ರೇಕಿಂಗ್ ನ್ಯೂಸ್
09-11-20 11:04 am Mangalore Correspondent ಕರಾವಳಿ
ಮಂಗಳೂರು, ನವೆಂಬರ್ 09 : ವಯೋಸಹಜ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದ್ರೆ ಕ್ಷೇತ್ರದ ಮಾಜಿ ಶಾಸಕ ರತನ್ ಕುಮಾರ್ ಕಟ್ಟೆಮಾರ್(82) ನಿಧನರಾಗಿದ್ದಾರೆ.
ಮೂಲ್ಕಿ - ಮೂಡುಬಿದ್ರೆ ಕ್ಷೇತ್ರದಲ್ಲಿ 1967ರಿಂದ 1971ರ ಅವಧಿಗೆ ಸ್ವತಂತ್ರ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ರತನ್ ಕುಮಾರ್ ಕಟ್ಟೆಮಾರ್, ಮೂಡುಬಿದ್ರೆಯ ಎರಡನೇ ಶಾಸಕರೆನಿಸಿದ್ದರು. ಆಬಳಿಕ 1971ರಲ್ಲಿ ಸುರತ್ಕಲ್ ಕ್ಷೇತ್ರದಲ್ಲಿ ಸ್ಪರ್ಧಿಸಿ ರತನ್ ಕುಮಾರ್ ಪರಾಜಿತರಾಗಿದ್ದರು. ಜನಪ್ರತಿನಿಧಿಯಾಗಿ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಮಸೂದೆಯ ವಿರುದ್ಧ ದನಿಯೆತ್ತಿದ್ದ ಅವರು, ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬೇಡಿಕೆ ಇಟ್ಟು ಗಮನ ಸೆಳೆದಿದ್ದರು. ಶಾಸಕರಾಗಿ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬೇಡಿಕೆ ಇಟ್ಟಿದ್ದು ಅದೇ ಮೊದಲು ಮತ್ತು ಅದೇ ಕೊನೆ. ಬೈಕ್, ಕಾರುಗಳಿಲ್ಲದ ಎಪ್ಪತ್ತರ ದಶಕದಲ್ಲಿ ರತನ್ ಕುಮಾರ್ ತಮ್ಮ ಜಾವಾ ಬೈಕ್ನಲ್ಲಿಯೇ ಬೆಂಗಳೂರು, ಮದ್ರಾಸ್, ತಿರುಪತಿ, ಕೊಚ್ಚಿ ಹೀಗೆ ದೂರದ ರಾಜ್ಯಗಳಿಗೂ ಸುತ್ತಾಡಿ ಗಮನ ಸೆಳೆದಿದ್ದರು.
1968ರಲ್ಲಿ ಮೈಸೂರಿನಲ್ಲಿ ಆನೆಗಳನ್ನು ಸೆರೆಹಿಡಿಯುವ ಖೆಡ್ಡಾದ ಕಾರ್ಯಾಚರಣೆ ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಫೈರಿಂಗ್ ಆಗಿದ್ದು ಅವರ ಎಡಕಣ್ಣಿಗೆ ಗಂಭೀರ ಹಾನಿಯಾಗಿತ್ತು. ಭೂಸೇನೆಯ ಸ್ಥಾಪಕ ಕಾರ್ಯದರ್ಶಿ, ರೈತ ಪರ ಭೂಮಾಲೀಕರ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಅವರು ಜಯಪ್ರಕಾಶ್ ನಾರಾಯಣರ ಚಳವಳಿಯಲ್ಲಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದ್ದರು.
1986ರ ಬಳಿಕ ಅಧ್ಯಾತ್ಮಿಕ ನೆಲೆಯಲ್ಲಿ ತೊಡಗಿಕೊಂಡು ಮಂಗಳೂರಿನ ತಮ್ಮ ನಿವಾಸದಲ್ಲಿ ದೇವಿ ಧರ್ಮಧೂತರೆಸಿಕೊಂಡು ಕಾರ್ಯ ನಿರತರಾಗಿದ್ದರು. ಮಾಜಿ ಶಾಸಕ ಕಟ್ಟೆಮಾರ್ ಅವರ ನಿಧನಕ್ಕೆ ಮೂಡುಬಿದಿರೆ ಜೈನಮಠದ ಭಟ್ಟಾರಕ ಶ್ರೀಗಳವರು ಸಂತಾಪ ವ್ಯಕ್ತಪಡಿದ್ದಾರೆ.
Moodbidri fomer Karnataka Minister Ratan Kumar Kattemar passes away at 82. He served as MLA from 1967 to 1972.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am