ಬ್ರೇಕಿಂಗ್ ನ್ಯೂಸ್
09-11-20 11:04 am Mangalore Correspondent ಕರಾವಳಿ
ಮಂಗಳೂರು, ನವೆಂಬರ್ 09 : ವಯೋಸಹಜ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದ್ರೆ ಕ್ಷೇತ್ರದ ಮಾಜಿ ಶಾಸಕ ರತನ್ ಕುಮಾರ್ ಕಟ್ಟೆಮಾರ್(82) ನಿಧನರಾಗಿದ್ದಾರೆ.
ಮೂಲ್ಕಿ - ಮೂಡುಬಿದ್ರೆ ಕ್ಷೇತ್ರದಲ್ಲಿ 1967ರಿಂದ 1971ರ ಅವಧಿಗೆ ಸ್ವತಂತ್ರ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ರತನ್ ಕುಮಾರ್ ಕಟ್ಟೆಮಾರ್, ಮೂಡುಬಿದ್ರೆಯ ಎರಡನೇ ಶಾಸಕರೆನಿಸಿದ್ದರು. ಆಬಳಿಕ 1971ರಲ್ಲಿ ಸುರತ್ಕಲ್ ಕ್ಷೇತ್ರದಲ್ಲಿ ಸ್ಪರ್ಧಿಸಿ ರತನ್ ಕುಮಾರ್ ಪರಾಜಿತರಾಗಿದ್ದರು. ಜನಪ್ರತಿನಿಧಿಯಾಗಿ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಮಸೂದೆಯ ವಿರುದ್ಧ ದನಿಯೆತ್ತಿದ್ದ ಅವರು, ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬೇಡಿಕೆ ಇಟ್ಟು ಗಮನ ಸೆಳೆದಿದ್ದರು. ಶಾಸಕರಾಗಿ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬೇಡಿಕೆ ಇಟ್ಟಿದ್ದು ಅದೇ ಮೊದಲು ಮತ್ತು ಅದೇ ಕೊನೆ. ಬೈಕ್, ಕಾರುಗಳಿಲ್ಲದ ಎಪ್ಪತ್ತರ ದಶಕದಲ್ಲಿ ರತನ್ ಕುಮಾರ್ ತಮ್ಮ ಜಾವಾ ಬೈಕ್ನಲ್ಲಿಯೇ ಬೆಂಗಳೂರು, ಮದ್ರಾಸ್, ತಿರುಪತಿ, ಕೊಚ್ಚಿ ಹೀಗೆ ದೂರದ ರಾಜ್ಯಗಳಿಗೂ ಸುತ್ತಾಡಿ ಗಮನ ಸೆಳೆದಿದ್ದರು.
1968ರಲ್ಲಿ ಮೈಸೂರಿನಲ್ಲಿ ಆನೆಗಳನ್ನು ಸೆರೆಹಿಡಿಯುವ ಖೆಡ್ಡಾದ ಕಾರ್ಯಾಚರಣೆ ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಫೈರಿಂಗ್ ಆಗಿದ್ದು ಅವರ ಎಡಕಣ್ಣಿಗೆ ಗಂಭೀರ ಹಾನಿಯಾಗಿತ್ತು. ಭೂಸೇನೆಯ ಸ್ಥಾಪಕ ಕಾರ್ಯದರ್ಶಿ, ರೈತ ಪರ ಭೂಮಾಲೀಕರ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಅವರು ಜಯಪ್ರಕಾಶ್ ನಾರಾಯಣರ ಚಳವಳಿಯಲ್ಲಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದ್ದರು.
1986ರ ಬಳಿಕ ಅಧ್ಯಾತ್ಮಿಕ ನೆಲೆಯಲ್ಲಿ ತೊಡಗಿಕೊಂಡು ಮಂಗಳೂರಿನ ತಮ್ಮ ನಿವಾಸದಲ್ಲಿ ದೇವಿ ಧರ್ಮಧೂತರೆಸಿಕೊಂಡು ಕಾರ್ಯ ನಿರತರಾಗಿದ್ದರು. ಮಾಜಿ ಶಾಸಕ ಕಟ್ಟೆಮಾರ್ ಅವರ ನಿಧನಕ್ಕೆ ಮೂಡುಬಿದಿರೆ ಜೈನಮಠದ ಭಟ್ಟಾರಕ ಶ್ರೀಗಳವರು ಸಂತಾಪ ವ್ಯಕ್ತಪಡಿದ್ದಾರೆ.
Moodbidri fomer Karnataka Minister Ratan Kumar Kattemar passes away at 82. He served as MLA from 1967 to 1972.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm