ಬ್ರೇಕಿಂಗ್ ನ್ಯೂಸ್
06-09-23 10:57 pm Mangalore Correspondent ಕರಾವಳಿ
ಮಂಗಳೂರು, ಸೆ.6: ಕೋವಿಡ್ ಬಳಿಕ ಮಂಗಳೂರು ನಗರದಲ್ಲಿ ಸಂಚಾರ ನಿಲ್ಲಿಸಿದ್ದ 13 ಸರಕಾರಿ ಬಸ್ ಗಳನ್ನು ಮರು ಜಾರಿಗೊಳಿಸಬೇಕೆಂದು ಕಾಂಗ್ರೆಸ್ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ನೀಡಿರುವ ಮನವಿಯನ್ನು ರಾಜ್ಯ ಸರಕಾರ ಪುರಸ್ಕರಿಸಿದೆ. ಸೆ.7ರಿಂದಲೇ ದಿನಕ್ಕೊಂದು ಬಸ್ಸಿನಂತೆ 13 ರೂಟ್ ಗಳಲ್ಲಿಯೂ ಸರಕಾರಿ ಬಸ್ ಇಳಿಸುವುದಾಗಿ ಮಂಗಳೂರು ಸಾರಿಗೆ ಡಿಪೋ ಅಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಇದರಂತೆ, ಶಕ್ತಿನಗರದಿಂದ ಸ್ಟೇಟ್ ಬ್ಯಾಂಕಿಗೆ ಸೆ.7ರಂದು ಬೆಳಗ್ಗೆ 9.45ಕ್ಕೆ ಹೊಸತಾಗಿ ಸರಕಾರಿ ಬಸ್ ಸಂಚಾರ ನಡೆಸಲಿದೆ. ಇದರ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಡಲಿದ್ದಾರೆ. 13 ಬಸ್ ಗಳಲ್ಲಿ ಮಂಗಳೂರು ವಯಾ ಸುರತ್ಕಲ್ ನಿಂದ ಕಟೀಲು, ಮಂಗಳೂರಿನಿಂದ ಸೋಮೇಶ್ವರ, ಮಂಗಳೂರು ರೈಲ್ವೇ ಸ್ಟೇಶನ್ನಿಂದ ಬಜ್ಪೆ, ಸ್ಟೇಟ್ ಬ್ಯಾಂಕ್ ವೃತ್ತದಿಂದ ಶಕ್ತಿನಗರ, ಕುಂಜತ್ ಬೈಲ್, ಕಾಟಿಪಳ್ಳ, ಕೈಕಂಬ, ಪಿಲಿಕುಳ, ಮಂಗಳಪೇಟೆ, ಬಜಾಲ್ ಚರ್ಚ್, ಫೈಸಲ್ ನಗರ, ತಲಪಾಡಿ, ಕೀನ್ಯಾಕ್ಕೆ ಸರಕಾರಿ ಬಸ್ ಸಂಚಾರ ಇತ್ತು.
ಈ ಪೈಕಿ 11 ಬಸ್ ಗಳು ನರ್ಮ್ ಯೋಜನೆಯಡಿ ಮಂಗಳೂರು ನಗರಕ್ಕೆ ಮಂಜೂರಾಗಿದ್ದ ಸರಕಾರಿ ಬಸ್ಗಳಾಗಿದ್ದವು. ಒಟ್ಟು 22 ನರ್ಮ್ ಬಸ್ ಗಳಲ್ಲಿ ಕೋವಿಡ್ ಬಳಿಕ ಬಹುತೇಕ ಬಸ್ ಗಳನ್ನು ನಿಲ್ಲಿಸಲಾಗಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಎರಡು ತಿಂಗಳ ಹಿಂದೆಯೇ ಈ ಯೋಜನೆ ಆರಂಭಗೊಂಡಿದ್ದರೂ, ಮಂಗಳೂರು ನಗರದಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿರುವುದರಿಂದ ಇದರ ಲಾಭ ಮಂಗಳೂರಿನ ಮಂದಿಗೆ ಸಿಕ್ಕಿರಲಿಲ್ಲ. ಹೀಗಾಗಿ ನಿಂತು ಹೋಗಿದ್ದ ಈ ಹಿಂದೆ ಸಂಚಾರ ಮಾಡುತ್ತಿದ್ದ ಬಸ್ ಗಳನ್ನು ಮತ್ತೆ ಸಂಚರಿಸುವಂತೆ ಮಾಡಬೇಕೆಂದು ವಕೀಲರೂ ಆಗಿರುವ ಮನೋರಾಜ್ ರಾಜೀವ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವರಿಕೆ ಮಾಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಆದಿಯಾಗಿ ಅಧಿಕಾರಿ ವರ್ಗಕ್ಕೂ ಮನವಿಯನ್ನು ನೀಡಿದ್ದರು. ಅದರ ಫಲವಾಗಿ ಈಗ ಮತ್ತೆ ಸರಕಾರಿ ಬಸ್ ಗಳನ್ನು ಓಡಿಸಲು ಮಂಗಳೂರು ಕೆಎಸ್ಸಾರ್ಟಿಸಿ ಡಿಪೋ ಒಪ್ಪಿಕೊಂಡಿದೆ.
13 new government buses added to Mangalore city under Shakthi Yogana.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm