ಬ್ರೇಕಿಂಗ್ ನ್ಯೂಸ್
06-09-23 11:06 pm Mangalore Correspondent ಕರಾವಳಿ
ಮಂಗಳೂರು, ಸೆ.6: ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸ್ ಕಮಿಷನರ್ ಅವರ ಆದೇಶದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಿ ಆದೇಶ ಹೊರಡಿಸಿದ್ದರು. ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಬ್ಬ ಆಚರಿಸುವ ಸಮಿತಿಯ ಪ್ರಮುಖರ ಫೋಟೋಗಳನ್ನು, ಆಚರಿಸುವ ಜಾಗದ ದಾಖಲೆಗಳನ್ನು ಠಾಣೆಗೆ ತಂದುಪ್ಪಿಸಬೇಕು ಎಂಬ ನಿರ್ದೇಶನ ಸಮಂಜಸವಾದುದಲ್ಲ. ಸಮಿತಿಯಲ್ಲಿರುವ ಸದಸ್ಯರೆಲ್ಲರೂ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಅವರ ಫೋಟೋಗಳನ್ನು ಠಾಣೆಗೆ ತರಿಸುವ ವ್ಯವಸ್ಥೆ ಎಷ್ಟು ಸರಿ ? ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನು ಹಬ್ಬದ ಆಚರಣೆಯ ಸಂದರ್ಭ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು ಎಂಬ ನಿಯಮ ಹೇಳಿರುವುದು ಮೆರವಣಿಗೆಯನ್ನು ಹತ್ತಿಕ್ಕುವ ಯತ್ನದ ಒಂದು ಭಾಗವಾಗಿದೆ. ಮಂಗಳೂರು ವಿವಿಯಲ್ಲಿ ಕೂಡ ಗಣೇಶ ಹಬ್ಬ ಆಚರಣೆ ಮಾಡಬಾರದು ಎಂಬ ಸೂಚನೆಯೂ ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡಾವೇ ಆಗಿದೆ ಎಂದು ಅವರು ದೂರಿದ್ದಾರೆ.
ಸಾಂಪ್ರದಾಯಿಕವಾಗಿ ಈ ಹಿಂದಿನಂತೆ ನಡೆದು ಬಂದ ಹಬ್ಬವು ಯಥಾಸ್ಥಿತಿ ಆಚರಣೆಗೆ ಆಡಳಿತ ಅವಕಾಶ ಮಾಡಿಕೊಡಬೇಕು. ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭ ಹಬ್ಬದ ಆಚರಣೆಗಳಿಗೆ ಯಾವುದೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿರಲಿಲ್ಲ. ಇದೀಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಹಿಂದೂಗಳ ಸಾಂಪ್ರದಾಯಕ ಹಬ್ಬದ ಆಚರಣೆಗಳ ಮೇಲೆ ನಿಯಂತ್ರಣ ಹೇರಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಶಾಸಕ ಕಾಮತ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
Mangaluru South MLA D Vedavyas Kamath has said that it is not right to impose strict rules while celebrating many traditional and important festivals of Hindus.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm