ಬ್ರೇಕಿಂಗ್ ನ್ಯೂಸ್
09-11-20 01:31 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 09 : ಕೊರೋನಾ ಹೆಸರಲ್ಲಿ ಹಣ ಬಂದಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಯಿಂದ ಚಿನ್ನ ಎಗರಿಸಿ ಪರಾರಿಯಾಗಿರುವ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ, ಜಯಂತಿ ಮೋಸ ಹೋದ ಮಹಿಳೆ. ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ವಾಪಸ್ ಹೋಗುತ್ತಿದ್ದ ಜಯಂತಿ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬ ತನ್ನ ಪರಿಚಯ ಮಾಡಿಕೊಂಡಿದ್ದಾನೆ. ತಾನು, ಶೀನಪ್ಪ ಅವರ ಮಗ ಸಂತೋಷ್ ಎಂದು ಹೇಳಿ ನಂಬಿಸಿದ್ದಾನೆ. ನಿಮಗೆ ಕೊರೋನಾ ಹೆಸರಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಬಂದಿದೆ. ಅದನ್ನು ಪಡೆಯಲು ಹತ್ತು ಸಾವಿರ ರೂಪಾಯಿ ಪಾವತಿಸಬೇಕು ಎಂದು ಹೇಳಿದ್ದಲ್ಲದೆ ಅರ್ಜಿ ತುಂಬಿಸಲೆಂದು ಮಹಿಳೆಯನ್ನು ಮಿನಿ ವಿಧಾನಸೌಧಕ್ಕೆ ಕರೆದೊಯ್ದಿದ್ದಾನೆ. ಹಣ ಕೇಳಿದ್ದಕ್ಕೆ ಮಹಿಳೆ ಈಗ ನನ್ನಲ್ಲಿ ಹಣ ಇಲ್ಲ ಎಂದಿದ್ದಾರೆ. ಮಗನಿಗೆ ಕರೆ ಮಾಡಿ ಹಣ ಇದೆಯಾ ಎಂದು ಕೇಳುತ್ತೇನೆ ಎಂದಿದ್ದು, ಅದಕ್ಕೆ ಯುವಕ, ಮಗನಿಗೆ ನಾನು ಆಗಲೇ ಕರೆ ಮಾಡಿ ಕೇಳಿದ್ದೇನೆ. ಆತ ಇಲ್ಲ ಎಂದಿದ್ದಾನೆ. ತಾಯಿಯಲ್ಲಿ ಹಣ ಇಲ್ಲದಿದ್ದರೆ ಅವರ ಚಿನ್ನ ಪಡೆದು ಹಣ ತೆಗೆಯುವಂತೆ ಹೇಳಿದ್ದಾನೆಂದು ಅಪರಿಚಿತ ವ್ಯಕ್ತಿ ಮಹಿಳೆಯನ್ನು ನಂಬಿಸಿದ್ದಾನೆ.
ಅಪರಿಚಿತನ ಮಾತನ್ನು ನಂಬಿದ ಮಹಿಳೆ ಕಿವಿಯಲ್ಲಿದ್ದ ಬೆಂಡೋಲೆ ತೆಗೆದು ಕೊಟ್ಟಿದ್ದಾರೆ. ಚಿನ್ನ ಪಡೆದ ವ್ಯಕ್ತಿ ನೀವು ಇಲ್ಲೇ ಕುಳಿತುಕೊಳ್ಳಿ ಎಂದು ಹೇಳಿ ಹೋದವನು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೊನೆಗೆ ಮಹಿಳೆ ಮಿನಿ ವಿಧಾನಸೌಧದ ಕಚೇರಿಯ ಮಹಿಳಾ ಸಿಬ್ಬಂದಿ ಮೂಲಕ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಸ್ಥಳಕ್ಕೆ ಬಂದ ಅವರ ಮಗ ತಾಯಿಯನ್ನು ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಹೋಗಿ ದೂರು ನೀಡಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಸಿ.ಸಿ. ಕ್ಯಾಮರ ದೃಷ್ಯ ಆಧರಿಸಿ, ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
In an incident that occurred on the morning of Monday, November 9, a financially poor woman lost her gold as she was fooled by fraudsters saying that she has got ‘Corona’ money in her name but need to pay fee in order to get the same and made good with her gold.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 11:02 pm
Mangalore Correspondent
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm