ಬ್ರೇಕಿಂಗ್ ನ್ಯೂಸ್
09-11-20 01:31 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 09 : ಕೊರೋನಾ ಹೆಸರಲ್ಲಿ ಹಣ ಬಂದಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಯಿಂದ ಚಿನ್ನ ಎಗರಿಸಿ ಪರಾರಿಯಾಗಿರುವ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ, ಜಯಂತಿ ಮೋಸ ಹೋದ ಮಹಿಳೆ. ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ವಾಪಸ್ ಹೋಗುತ್ತಿದ್ದ ಜಯಂತಿ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬ ತನ್ನ ಪರಿಚಯ ಮಾಡಿಕೊಂಡಿದ್ದಾನೆ. ತಾನು, ಶೀನಪ್ಪ ಅವರ ಮಗ ಸಂತೋಷ್ ಎಂದು ಹೇಳಿ ನಂಬಿಸಿದ್ದಾನೆ. ನಿಮಗೆ ಕೊರೋನಾ ಹೆಸರಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಬಂದಿದೆ. ಅದನ್ನು ಪಡೆಯಲು ಹತ್ತು ಸಾವಿರ ರೂಪಾಯಿ ಪಾವತಿಸಬೇಕು ಎಂದು ಹೇಳಿದ್ದಲ್ಲದೆ ಅರ್ಜಿ ತುಂಬಿಸಲೆಂದು ಮಹಿಳೆಯನ್ನು ಮಿನಿ ವಿಧಾನಸೌಧಕ್ಕೆ ಕರೆದೊಯ್ದಿದ್ದಾನೆ. ಹಣ ಕೇಳಿದ್ದಕ್ಕೆ ಮಹಿಳೆ ಈಗ ನನ್ನಲ್ಲಿ ಹಣ ಇಲ್ಲ ಎಂದಿದ್ದಾರೆ. ಮಗನಿಗೆ ಕರೆ ಮಾಡಿ ಹಣ ಇದೆಯಾ ಎಂದು ಕೇಳುತ್ತೇನೆ ಎಂದಿದ್ದು, ಅದಕ್ಕೆ ಯುವಕ, ಮಗನಿಗೆ ನಾನು ಆಗಲೇ ಕರೆ ಮಾಡಿ ಕೇಳಿದ್ದೇನೆ. ಆತ ಇಲ್ಲ ಎಂದಿದ್ದಾನೆ. ತಾಯಿಯಲ್ಲಿ ಹಣ ಇಲ್ಲದಿದ್ದರೆ ಅವರ ಚಿನ್ನ ಪಡೆದು ಹಣ ತೆಗೆಯುವಂತೆ ಹೇಳಿದ್ದಾನೆಂದು ಅಪರಿಚಿತ ವ್ಯಕ್ತಿ ಮಹಿಳೆಯನ್ನು ನಂಬಿಸಿದ್ದಾನೆ.
ಅಪರಿಚಿತನ ಮಾತನ್ನು ನಂಬಿದ ಮಹಿಳೆ ಕಿವಿಯಲ್ಲಿದ್ದ ಬೆಂಡೋಲೆ ತೆಗೆದು ಕೊಟ್ಟಿದ್ದಾರೆ. ಚಿನ್ನ ಪಡೆದ ವ್ಯಕ್ತಿ ನೀವು ಇಲ್ಲೇ ಕುಳಿತುಕೊಳ್ಳಿ ಎಂದು ಹೇಳಿ ಹೋದವನು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೊನೆಗೆ ಮಹಿಳೆ ಮಿನಿ ವಿಧಾನಸೌಧದ ಕಚೇರಿಯ ಮಹಿಳಾ ಸಿಬ್ಬಂದಿ ಮೂಲಕ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಸ್ಥಳಕ್ಕೆ ಬಂದ ಅವರ ಮಗ ತಾಯಿಯನ್ನು ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಹೋಗಿ ದೂರು ನೀಡಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಸಿ.ಸಿ. ಕ್ಯಾಮರ ದೃಷ್ಯ ಆಧರಿಸಿ, ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
In an incident that occurred on the morning of Monday, November 9, a financially poor woman lost her gold as she was fooled by fraudsters saying that she has got ‘Corona’ money in her name but need to pay fee in order to get the same and made good with her gold.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm