ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am