ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm