ಬ್ರೇಕಿಂಗ್ ನ್ಯೂಸ್
09-11-20 02:14 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 09 :ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಖಾಸಗೀಕರಣಗೊಳಿಸಿ ಅದಾನಿ ಕಂಪೆನಿಗೆ ಗುತ್ತಿಗೆ ವಹಿಸಿರುವ ಕೇಂದ್ರ ಸರಕಾರದ ಕ್ರಮವನ್ನ ಖಂಡಿಸಿ ಬಜ್ಪೆ ಬಳಿಯ ಕೆಂಜಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಮಾನ ನಿಲ್ದಾಣ ಪ್ರವೇಶ ದ್ವಾರವಿರುವ ನಗರದ ಕೆಂಜಾರು ಬಳಿ ಸೇರಿದ ಸುಮಾರು 50 ಕ್ಕೂ ಅಧಿಕ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಮಂಗಳೂರಿಗೆ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗಾಗಿ ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್ ಕೇಂದ್ರಕ್ಕೆ ಒತ್ತಡ ಹೇರಿದ್ದರು. ಅದರ ಫಲವಾಗಿ ಇಂದಿನ ವಿಸ್ತೃತ ವಿಮಾನ ನಿಲ್ದಾಣ ರೆಡಿಯಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದು ವಿಮಾನ ನಿಲ್ದಾಣವನ್ನೇ ಅದಾನಿಗೆ ಕೊಟ್ಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಈ ಜಿಲ್ಲೆಗೆ ಕೊಟ್ಟ ಕೊಡುಗೆ ಏನು ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.
ಮಾಜಿ ಶಾಸಕ ಜೆ.ಆರ್ ಲೋಬೊ ಮಾತನಾಡಿ, ಎನ್ ಎಂಪಿಟಿ ಅನುಷ್ಠಾನಕ್ಕೆ ತಂದಿದ್ದು ಯು.ಎಸ್.ಮಲ್ಯರು. ಅದರ ಅಭಿವೃದ್ಧಿಗಾಗಿ ಶ್ರಮಿಸಿದ್ದು ವೀರಪ್ಪ ಮೊಯ್ಲಿ. ಈಗ ವಿಮಾನ ನಿಲ್ದಾಣ ಖಾಸಗಿಯವರಿಗೆ ಕೊಟ್ಟಿದ್ದಾರೆ. ಇನ್ನು ಎನ್ಎಂಪಿಟಿ ಬಂದರನ್ನೂ ಖಾಸಗಿಗೆ ಕೊಡಲ್ಲ ಎನ್ನುವ ಗ್ಯಾರಂಟಿಯಿಲ್ಲ.. ಈ ಜಿಲ್ಲೆಯ ಬ್ಯಾಂಕ್ ಗಳನ್ನೆಲ್ಲ ಇನ್ನಿಲ್ಲವಾಗಿಸಿದ್ದಾರೆ. ಹಾಗಾದರೆ ಬಿಜೆಪಿಯಿಂದ ಈ ಜಿಲ್ಲೆಗೆ ಸಿಕ್ಕಿದ ಕೊಡುಗೆ ಏನು? ಬಿಜೆಪಿಯವರೇ ಇಲ್ಲಿನದ್ದೆಲ್ಲ ಖಾಸಗಿಗೆ ಕೊಟ್ಟು ಮುಗಿಸಿದ್ದು ಬಿಟ್ಟರೆ ಸಾಧಿಸಿದ್ದು ಏನು ಎಂದು ಕೇಳಿದ್ದಾರೆ.
ಅಲ್ಲದೆ, ವಿಮಾನ ನಿಲ್ದಾಣಕ್ಕೆ ತುಳುನಾಡಿನ ಆರಾಧನಾ ಪುರುಷರಾದ ಕೋಟಿ ಚೆನ್ನಯ್ಯ ಇಲ್ಲವೇ ಮಂಗಳೂರು ಅಭಿವೃದ್ಧಿಯ ರೂವಾರಿ ಶ್ರೀನಿವಾಸ್ ಮಲ್ಯ ಅವರ ಹೆಸರಿಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜಾ, ಮಿಥುನ್ ರೈ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತು ಒದಗಿಸಲಾಗಿತ್ತು.
Video:
Congress Leaders and Members protests at khanjar, near Mangalore Airport, against privatisation issue and takes over of Mangalore International Airport by Adani Group for commercial operations.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm