ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.

ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am