ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.

ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm