ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.

ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm