ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am