ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
01-01-26 03:05 pm
Bangalore Correspondent
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm