ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm