ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm