ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm