ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm