ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm