ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm