ಬ್ರೇಕಿಂಗ್ ನ್ಯೂಸ್
18-09-23 02:41 pm Mangalore Correspondent ಕರಾವಳಿ
ಮಂಗಳೂರು, ಸೆ.18: ದೇವಸ್ಥಾನ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ಆಟೋ ರಿಕ್ಷಾ ಇಳಿಜಾರು ಹಾದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ-ಬಂಗ್ಲೆಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಫಲಿಗ (25) ಮೃತಪಟ್ಟ ಯುವತಿ. ಅಪಘಾತದಲ್ಲಿ ಯುವತಿ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಇವರಲ್ಲಿ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಯುವತಿಯ ಕುಟುಂಬಸ್ಥರು ಅರ್ಕುಳದಿಂದ ಆಟೋದಲ್ಲಿ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು ಆನಂತರ ಅದ್ಯಪಾಡಿ ದೇವಸ್ಥಾನಕ್ಕೆ ಬಂದಿದ್ದರು. ಹಿಂತಿರುಗಿ ಹೋಗಲು ಗೂಗಲ್ ಮ್ಯಾಪಲ್ಲಿ ಗುರುಪುರ - ಬಂಗ್ಲೆಗುಡ್ಡೆ ರಸ್ತೆಯನ್ನು ಹತ್ತಿರ ಇದೆಯೆಂದು ತೋರಿಸಿತ್ತು. ಇದರಿಂದಾಗಿ ಆಟೋವನ್ನು ಕಿರಿದಾದ ರಸ್ತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಆಟೋ ರಭಸದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಜಪೆ ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Auto crashes against electricity pole Young woman dead, five others injured at Gurupura.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am