ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm