ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am