ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm