ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm