ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm