ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.
ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm