ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm