ಬ್ರೇಕಿಂಗ್ ನ್ಯೂಸ್
24-09-23 04:51 pm Mangalore Correspondent ಕರಾವಳಿ
ಮಂಗಳೂರು, ಸೆ.24: ಪ್ರಣವಾನಂದ ಸ್ವಾಮೀಜಿ ನಮ್ಮ ಸಮುದಾಯದ ನಾಯಕ ಅಲ್ಲ, ಸುಮ್ಮನೆ ಬುರುಡೆ ಬಿಟ್ಟುಕೊಂಡು ಓಡಾಡಿದ್ರೆ ನಾಯಕ ಆಗಲ್ಲ ಎಂದು ಶಿಕ್ಷಣ ಸಚಿವ, ಈಡಿಗ ಜನಾಂಗದ ನಾಯಕ ಮಧು ಬಂಗಾರಪ್ಪ ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪ್ರಣವಾನಂದ ಸ್ವಾಮೀಜಿ ಬಗ್ಗೆ ಶಿವಮೊಗ್ಗದಲ್ಲಿ ಈಡಿಗ ಸಂಘದವರು ವಿರೋಧ ವ್ಯಕ್ತಪಡಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆ ವ್ಯಕ್ತಿಯನ್ನೂ ನಾನೂ ವಿರೋಧಿಸುತ್ತೇನೆ. ನಮ್ಮ ಈಡಿಗ, ಬಿಲ್ಲವ ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ನಮ್ಮ ಸಮಾಜ ಆತನನ್ನು ಈಡಿಗ ಸಮುದಾಯದ ಸ್ವಾಮೀಜಿ ಎಂದು ಒಪ್ಪಿಕೊಂಡಿಲ್ಲ. ಸುಮ್ನೆ ಬುರುಡೆ ಬಿಟ್ಕೊಂಡು ಪ್ರಚಾರ ಪಡೆಯೋದಷ್ಟೆ ಆತನ ಕಾಯಕ. ಯಾರೇ ಆಗಲಿ, ಸಮಾಜವನ್ನು ದಾರಿ ತಪ್ಪಿಸುತ್ತಾನಂದ್ರೆ, ಅಂಥವರನ್ನು ಕಟ್ ಮಾಡಬೇಕು. ನಾನು ಇವರನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇಂಥವರನ್ನು ಹೇಟ್ ಮಾಡ್ತೀನಿ ಎಂದರು.
ಚುನಾವಣೆ ಸಮಯದಲ್ಲಿ ಪ್ರಣವಾನಂದ ಪಾದಯಾತ್ರೆ ಮಾಡಿದಾಗ ನೀವ್ಯಾರೂ ಅಲ್ಲಗಳೆಯುವ ಕೆಲಸ ಮಾಡಿಲ್ಲ ಎಂದು ಕೇಳಿದ್ದಕ್ಕೆ, ನಾನು ವೈಯಕ್ತಿಕವಾಗಿ ಆತನನ್ನು ಚುನಾವಣೆ ಲಾಭಕ್ಕೆ ಬಳಸಿಕೊಂಡಿಲ್ಲ. ಪ್ರಚಾರಕ್ಕೋಸ್ಕರ ಕಿಡಿಗೇಡಿ ರೀತಿ ಮಾಡ್ತಾರೆ. ಬಿಕೆ ಹರಿಪ್ರಸಾದ್ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಟ್ಟುಕೊಂಡಿರುವ ವ್ಯಕ್ತಿ. ಅವರೇನು ಹೇಳಿದರೂ, ಪ್ರಣವಾನಂದ ಪರವಾಗಿ ಅಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಸಾವಿರದಷ್ಟು ಪಬ್ಲಿಕ್ ಶಾಲೆಗಳನ್ನು ತೆರೆಯಲಿದ್ದು, ಆಮೂಲಕ ಎಲ್ಕೆಜಿಯಿಂದ ಹಿಡಿದು ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ಬಡವರಿಗೆ ಸಿಗುವಂತೆ ಮಾಡುತ್ತೇನೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ತಲಾ ಮೂರು ಶಾಲೆಗಳನ್ನು ತೆರೆಯಲಿದ್ದು, ಮುಂದಿನ ವರ್ಷವೇ 300 ಶಾಲೆ ಅಸ್ತಿತ್ವಕ್ಕೆ ಬರಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.
Karnataka Education Minister Madhu Bangarappa has said that Pranavananda Swamiji is not the leader of our community and if he just walks around with his skull, he will not become a leader.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm