ಬ್ರೇಕಿಂಗ್ ನ್ಯೂಸ್
10-11-20 02:03 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 10 : ಮಂಗಳೂರು ನಗರದಲ್ಲಿ ಏಕಾಏಕಿ ರಸ್ತೆ ಕಾಮಗಾರಿ ನಡೆಸುವ ಮೂಲಕ ಬಿಜೆಪಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಯೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಮಿಥುನ್ ರೈ, ಮಂಗಳೂರಲ್ಲಿ ಏಕಾಏಕಿ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು ಇದರಿಂದ ಬಡ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಕೊರೊನಾ ಆಘಾತದ ಬಳಿಕ ಜನರಿಗೆ ರಸ್ತೆ ಕಾಮಗಾರಿ ನೆಪದಲ್ಲಿ ಮತ್ತೊಂದು ಹೊಡೆತ ನೀಡಲಾಗಿದೆ. ಯಾರ ಒತ್ತಡಕ್ಕೆ ಒಳಗಾಗಿ ಏಕಾಏಕಿ ಕಾಮಗಾರಿ ಆರಂಭಿಸಲಾಗಿದೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.





ರಸ್ತೆ ಕಾಮಗಾರಿ ವಿಚಾರದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತಿದೆ. ಮರದ ರೆಂಬೆಯ ಮೇಲೆ ಕುಳಿತು ಮರ ಕಡಿಯುವ ಕೆಲಸ ಮಾಡುತ್ತಿದ್ದಾರೆ. ಒಂದೇ ಸಮಯದಲ್ಲಿ ಎಲ್ಲ ಕಡೆ ಅಗೆದು ಹಾಕಿದ್ದಾರೆ. ಅತ್ತ ಕಾರ್ ಸ್ಟ್ರೀಟ್, ಬಂದರು, ಹಂಪನಕಟ್ಟೆ ಹೀಗೆ ಎಲ್ಲ ಕಡೆ ಅಗೆದು ಬಂದ್ ಮಾಡಿದರೆ ಅಲ್ಲಿನ ನಿವಾಸಿಗಳು ಎಲ್ಲಿ ಹೋಗಬೇಕು? ಅಲ್ಲಿನ ಬೀದಿಬದಿ ವ್ಯಾಪಾರಿಗಳು, ರಿಕ್ಷಾ ಚಾಲಕರು ಏನು ಮಾಡಬೇಕು ಅಲ್ಲಿನ ಜನರ ಪ್ರಶ್ನೆಗೆ, ಯಾರು ಉತ್ತರ ಕೊಡುತ್ತಾರೆ. ಜನರು ನಡೆದು ಹೋಗುವುದಕ್ಕೂ ಆಗದ ಪರಿಸ್ಥಿತಿ ಅಲ್ಲಿ ಉಂಟಾಗಿದೆ. ಈ ಸ್ಥಿತಿಗೆ ಇಲ್ಲಿನ ಬಿಜೆಪಿ ಶಾಸಕರೇ ಕಾರಣ. ಈ ಕೂಡಲೇ ದ.ಕ. ಜಿಲ್ಲಾಧಿಕಾರಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ, ಕಾಮಗಾರಿ ಬಗ್ಗೆ ಸ್ಪಷ್ಟ ವಿವರ ನೀಡಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.
ಮಾಜಿ ಶಾಸಕ ಜೆ.ಆರ್.ಲೋಬೊ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಕಾರ್ಪೊರೇಟರ್ ಗಳಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ನವೀನ್ ಡಿಸೋಜ ಉಪಸ್ಥಿತರಿದ್ದರು.
The BJP leaders of Mangaluru are ruling like Tuglaks after creating havoc in the city by Diversion of Road in Hampankatta slammed Youth Congress Leader Mithun Rai in Mangalore.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm