ಬ್ರೇಕಿಂಗ್ ನ್ಯೂಸ್
24-09-23 11:09 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.

ಬ್ಯಾನರ್ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಜರಂಗದಳ, ವಿಶ್ವ ಹಿಂದು ಪರಿಷತ್ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಕ್ಕೆಯಲ್ಲಿ ಈ ರೀತಿ ದಂಡನೆ ವಿಧಿಸಲು ಇಲ್ಲಿ ಷರೀಯತ್ ಕಾನೂನು ಜಾರಿಯಲ್ಲಿದೆಯಾ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ ಮಾಡಿದ್ದು, ಇವರ ಗೊಡ್ಡು ಬೆದರಿಕೆಗಳಿಗೆ ಹಿಂದು ವ್ಯಾಪಾರಿಗಳು ಮಣಿಯಬಾರದು. ನಿಮ್ಮ ಜೊತೆಗೆ ಹಿಂದು ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದಾರೆ.
Mangalore Eid Milad 2023, No fishermem to work on Eid banner creates spark, Bajarang dal warns on social media.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm