ಬ್ರೇಕಿಂಗ್ ನ್ಯೂಸ್
24-09-23 11:27 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ, ಗೋಸೇವಾ ಗತಿವಿಧಿ ಕರ್ನಾಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗೋರಥಯಾತ್ರೆಗೆ ಪುದು ಗ್ರಾಮದ ಬ್ರಹ್ಮಗಿರಿ, ಗೋವಿನ ತೋಟದಲ್ಲಿ ಚಾಲನೆ ನೀಡಲಾಯಿತು. ಗೋಶಾಲೆಯ ಭಕ್ತಿಭೂಷಣದಾಸ್ ಪ್ರಭೂಜಿಯವರ ಮಾರ್ಗದರ್ಶನದಲ್ಲಿ ದೇಸಿ ಗೋತಳಿಯ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ.
ಭಾನುವಾರ ಬೆಳಗ್ಗೆ ಗೋವಿಗೆ ಮತ್ತು ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಲಾಯಿತು. ವೃಂದಾವನದ ರಮೇಶ್ ಗೋಸ್ವಾಮಿ ಉಪಸ್ಥಿತಿಯಲ್ಲಿ ಗೋಪೂಜೆ ಮತ್ತು ಗೋಕಥೆಯನ್ನು ಪಾರಾಯಣ ಮಾಡಲಾಯಿತು. ನ.14ರಿಂದ 22ರ ವರೆಗೆ ನಡೆಯಲಿರುವ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವದ ಪ್ರಚಾರಾರ್ಥ ಗೋರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಯಲ್ಲಿ ರಥ ಸಂಚರಿಸಲಿದೆ. ರಥಕ್ಕೆ ವಿಶೇಷ ಪೂಜೆಗೈದು ಚಾಲನೆ ನೀಡಿದ್ದು, ಈ ವೇಳೆ ಯಜ್ಞ ಸಮಿತಿಯ ಅಧ್ಯಕ್ಷ ಬೃಜೇಶ್ ಚೌಟ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



ಸೆ.25ರಂದು ಬೆಳಗ್ಗೆ 7ಕ್ಕೆ ಗೋರಥವು ಮೂಡುಬಿದಿರೆಗೆ ತಲುಪಲಿದ್ದು, ಅಲ್ಲಿನ ವೆಂಕಟರಮಣ ದೇವಸ್ಥಾನ ವಠಾರದಲ್ಲಿ ಗೋಪೂಜೆ ಮತ್ತು ಗೋಕಥೆ ಪಾರಾಯಣ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆನಂತರ ಮೂಡುಬಿದ್ರೆ ತಾಲೂಕಿನ ವಿವಿಧ ಶಾಲೆ, ಕಾಲೇಜುಗಳಿಗೆ ತೆರಳಲಿದೆ. ಚಲಿಸುವ ಕಾಮಧೇನು ಆಗಿರುವ ದೇಸಿ ಗಿಡ್ಡ ತಳಿ ಗೋವನ್ನು ರಥದಲ್ಲಿರಿಸಿ ಅದರ ಮಹತ್ವವನ್ನು ಸಾರುವ ಉದ್ದೇಶ ರಥಯಾತ್ರೆಯದ್ದಾಗಿದೆ. ಸೆ.24ರಂದಿ ನ.8ರ ವರೆಗೆ ಗೋರಥಯಾತ್ರೆಯು ಮೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ.
The 'Goratha Yatra' organised jointly by Radhasurabhi Gomandir, Rashtriya Goseva Sansthan and Goseva Gatividhi Karnataka was flagged off at Brahmagiri in Pudu village. Under the guidance of Bhaktibhushandas Prabhuji of Gaushala, the Rath Yatra is being organised to create awareness about desi cow breed.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm